ದುಬೈ: ಓಮನ್ ನಿಂದ ದುಬೈಗೆ ಬರುತ್ತಿದ್ದ ಬಸ್ ರಸ್ತೆ ಸೂಚಕ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, ಇವರಲ್ಲಿ ಎಂಟು ಮಂದಿ ಭಾರತೀಯರಾಗಿದ್ದಾರೆ.
ಈ ಕುರಿತು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ಮಾಹಿತಿ ನೀಡಿದೆ.
ಓಮನ್ ಸರ್ಕಾರಿ ಬಸ್ಸಿನಲ್ಲಿ ವಿವಿಧ ದೇಶಗಳ ಒಟ್ಟು 31ಜನರು ಪ್ರಯಾಣಿಸುತ್ತಿದ್ದರು. ನಿನ್ನೆ ಸಂಜೆ ದುಬೈನ ರಶಿದಿಯಾ ಬಳಿ ಟ್ರಾಫಿಕ್ ಸಿಗ್ನಲ್ ನಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್ ಮಗುಚಿಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಭಾರತೀಯರನ್ನು ರಾಜಗೋಪಾಲನ್, ಫಿರೋಜ್ ಖಾನ್ ಪಠಾಣ್, ರೇಶ್ಮಾ ಫಿರೋಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನಿ, ವಾಸುದೇವ್ ಮತ್ತು ತಿಲಕ್ ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.
1/2) We are sorry to inform that as per local authorities and relatives it is so far confirmed that 8 Indians have passed away in Dubai bus accident. Consulate is in touch with relatives of some of the deceased & awaits further details for others to inform their families.
— India in Dubai (@cgidubai) June 6, 2019